ಬೆಂಗಳೂರು: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪತ್ನಿ ಪ್ರಮೋದಾದೇವಿ ಅವರಿಗೆ ಪತ್ರ ಬರೆದಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಒಡೆಯರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
‘ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಒಡೆಯರ್ ಅವರು ಪಕ್ಷದ ಹಿರಿಯ ಮುಖಂಡರಲ್ಲಿ ಒಬ್ಬರಾಗಿದ್ದರು. ಪಕ್ಷದ ಪರವಾಗಿ ಮತ್ತು ವೈಯಕ್ತಿಕವಾಗಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಈ ಸಂದರ್ಭದಲ್ಲಿ ನಿಮ್ಮ ನೋವು ಮತ್ತು ದುಃಖ ನನಗೆ ಅರ್ಥವಾಗುತ್ತದೆ. ಅದೆಲ್ಲವನ್ನೂ ಸಹಿಸುವ ಶಕ್ತಿ ನಿಮಗೆ ದೊರೆಯಲಿ ಎಂಬುದಾಗಿ ಬೇಡುತ್ತೇನೆ’ ಎಂದು ಹೇಳಿದ್ದಾರೆ.