ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಒಳ ಜಗಳಗಳಿಂದ ಬೆಂಗಳೂರು ವಿ.ವಿಗೆ ಕೆಟ್ಟ ಹೆಸರು'

Last Updated 18 ಡಿಸೆಂಬರ್ 2012, 19:31 IST
ಅಕ್ಷರ ಗಾತ್ರ

ಬೆಂಗಳೂರು:  `ಬೆಂಗಳೂರು ವಿಶ್ವವಿದ್ಯಾಲಯ ಮೂಲತಃ ಉತ್ತಮ ವಿಶ್ವವಿದ್ಯಾಲಯವಾಗಿದೆ. ಆದರೆ, ಒಳಜಗಳಗಳಿಂದ ಇತ್ತೀಚೆಗೆ ಹೆಸರು ಕೆಡಿಸಿಕೊಂಡಿದೆ' ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯವು ಮಂಗಳವಾರ ವಿಶ್ವವಿದ್ಯಾಲಯದ ಕುವೆಂಪು ಬಯಲು ರಂಗ ಮಂದಿರದಲ್ಲಿ ಏರ್ಪಡಿಸಿದ್ದ `ಕನ್ನಡ ರಾಜ್ಯೋತ್ಸವ ಹಾಗೂ ವಿಶ್ವವಿದ್ಯಾಲಯ ದಿನಾಚರಣೆ' ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

`ಈ ವಿಶ್ವವಿದ್ಯಾಲಯದಲ್ಲಿಯೇ ನಾನು ಓದಿದ್ದು. ಇದರಲ್ಲಿ ಓದಿದ ನಾನು ಈಗ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿದ್ದೇನೆ. ಭವಿಷ್ಯಕ್ಕೆ ಉತ್ತಮ ಬುನಾದಿ ಹಾಕುವ ಶಿಕ್ಷಣ ಸಂಸ್ಥೆಯು ಈ ರೀತಿ ಒಳಜಗಳಗಳಿಂದ ಹೆಸರು ಕೆಡಿಸಿಕೊಳ್ಳುವುದು ಉತ್ತಮವಾದ ಬೆಳವಣಿಗೆಯಲ್ಲ' ಎಂದರು.

`ವಿಶ್ವವಿದ್ಯಾಲಯದ ಒಳಗೆ ಒಳ ಜಗಳಗಳನ್ನು ಮಾಡಿಕೊಂಡು, ಆಡಳಿತದಿಂದ ಹೆಸರು ಕೆಡಿಸಿಕೊಳ್ಳುವುದಕ್ಕಿಂತ, ಯಾವುದೇ ಸಮಸ್ಯೆಗಳಿದ್ದರೂ ಪರಸ್ಪರ ಮಾತಾಡಿಕೊಂಡು ಪರಿಹರಿಸಿಕೊಳ್ಳಬೇಕು. ಮಾತುಕತೆಯಿಂದ ಎಂತಹ ಸಮಸ್ಯೆಗಳು ಪರಿಹಾರವಾಗುತ್ತವೆ. ಜಗಳವಾಡುವುದರಿಂದ ಯಾವುದೇ ಸಮಸ್ಯೆಗಳು ಪರಿಹಾರವಾಗುವುದಿಲ್ಲ' ಎಂದು ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎನ್.ಆರ್.ಶೆಟ್ಟಿ ಮಾತನಾಡಿ, `ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಶಿಕ್ಷಕೇತರ ಸಿಬ್ಬಂದಿಯನ್ನು ಕಾಯಂಗೊಳಿಸಲು ಚಿಂತನೆ ನಡೆಸಬೇಕು' ಎಂದು ಹೇಳಿದರು.

`ಉತ್ತಮ ವಿಶ್ವವಿದ್ಯಾಲಯವೆಂದು ಹೆಸರು ಗಳಿಸಿದೆ. ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸಿ ಅವರಲ್ಲಿರುವ ಅಸಮಾಧಾನವನ್ನು ನಿವಾರಿಸಬೇಕು. ವಿಶ್ವವಿದ್ಯಾಲಯವು ಶಿಕ್ಷಣ ನೀಡುವ ಪವಿತ್ರ ಸ್ಥಾನವಾಗಿದೆ. ಇಲ್ಲಿ ಯಾವುದೇ ರೀತಿಯ ಜಗಳಗಳು ನಡೆಯದೆ, ಇನ್ನು ಮುಂದಾದರೂ ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುವಂತಾಗಲಿ' ಎಂದು ಆಶಿಸಿದರು.


`ಒಂದು ಶಿಕ್ಷಣ ಸಂಸ್ಥೆಯೆಂದರೆ ಅಲ್ಲಿ ಆಡಳಿತ, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಇವರೆಲ್ಲರೂ ಒಟ್ಟಾಗಿ ತಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಿಕೊಂಡು ಶಿಕ್ಷಣ ಸಂಸ್ಥೆಗಾಗಿ ದುಡಿಯಬೇಕು. ಆಗ, ಆ ಶಿಕ್ಷಣ ಸಂಸ್ಥೆ ಮತ್ತು ಅಲ್ಲಿನ ವಿದ್ಯಾರ್ಥಿಗಳು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT