ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣೇಶ್ ಮಾತನಾಡಿ, ಸರ್ಕಾರ ಮತ್ತು ಕಲ್ಯಾಣ ಮಂಡಳಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ನೀಡದೇ ಮೋಸ ಮಾಡುತ್ತಿವೆ. ಕೂಲಿ ಕಾರ್ಮಿಕರ ಬವಣೆಗೆ ಕಿಲುಬು ಕಾಸಿನ ಕಿಮ್ಮತ್ತನ್ನು ಸರ್ಕಾರ ತೋರದೇ ಇರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸಂಘದ ಅಧ್ಯಕ್ಷ ವೈ. ಸತ್ಯಪ್ಪ, ಹೋಬಳಿ ಸಂಘದ ಅಧ್ಯಕ್ಷ ಕಾಟಪ್ಪ ನಾಯಕ ಮಾತನಾಡಿದರು.
ಜಿಲ್ಲಾ ಉಪಾಧ್ಯಕ್ಷ ಗಂಗಾಧರ, ಚಳ್ಳಕೆರೆ ತಾಲ್ಲೂಕು ಸಂಘದ ಅಧ್ಯಕ್ಷ ಗೋಪಾಲ, ನಾಯಕನಹಟ್ಟಿ ಹೋಬಳಿ ಘಟಕದ ಉಪಾಧ್ಯಕ್ಷ ಮಹಮದ್ ರಫೀಕ್, ಬಿ. ತಿಪ್ಪೇಸ್ವಾಮಿ, ಟಿ. ಬಸಣ್ಣ, ಎನ್. ಮೂರ್ತಿ, ಎಚ್. ಕೃಷ್ಣಮೂರ್ತಿ ಇತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಶ್ರೀಗುರು ತಿಪ್ಪೇರುದ್ರಸ್ವಾಮಿ ಒಳಮಠದಲ್ಲಿ ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಾರ್ಮಿಕರು ಮೆರವಣಿಗೆ ನಡೆಸಿದರು.