ಬೆಂಗಳೂರು: ಮಹದೇವಪುರದಲ್ಲಿ ಬುಧವಾರ ಸಂಭವಿಸಿದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವಪುರ ವಲಯದ ಸಹಾಯಕ ಎಂಜಿನಿಯರ್ ರಮೇಶ್ ಎಂಬುವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.
`ಅನಧಿಕೃತ ಕಟ್ಟಡದ ನಿರ್ಮಾಣಕ್ಕೆ ಅನುಮತಿ ನೀಡಿರುವ ಆರೋಪದ ಮೇಲೆ ರಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ~ ಎಂದು ಬಿಬಿಎಂಪಿ ಆಯುಕ್ತ ಎಂ.ಕೆ.ಶಂಕರಲಿಂಗೇಗೌಡ ಪ್ರಜಾವಾಣಿ~ಗೆ ತಿಳಿಸಿದ್ದಾರೆ.