ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡ ನೆಲಸಮ: ಪರಿಹಾರಕ್ಕೆ ಕೋರ್ಟ್ ಆದೇಶ

Last Updated 17 ಡಿಸೆಂಬರ್ 2010, 10:35 IST
ಅಕ್ಷರ ಗಾತ್ರ

ಬೆಂಗಳೂರು: ಸಂಜಯನಗರದ ಗೆದ್ದಲಹಳ್ಳಿಯ ಬಳಿ ಇರುವ ಮನೆಗಳನ್ನು ಕಾನೂನು ಬಾಹಿರವಾಗಿ ನೆಲಸಮ ಮಾಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಹೈಕೋರ್ಟ್ ಗುರುವಾರ ದಂಡ ವಿಧಿಸಿ ಆದೇಶಿಸಿದೆ.

ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಪ್ರತಿ ಅರ್ಜಿದಾರನಿಗೆ ಈ ದಂಡದ ಹಣವನ್ನು ಪರಿಹಾರದ ರೂಪದಲ್ಲಿ ನೀಡಬೇಕು ಎಂದು ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ಆದೇಶಿಸಿದ್ದಾರೆ. ತಾರಸಿ ಮನೆ ಹೊಂದಿದ್ದವರಿಗೆ ತಲಾ 2ಲಕ್ಷ ಹಾಗೂ ಷೀಟ್ ಮನೆ ಹೊಂದಿದ್ದವರಿಗೆ ತಲಾ ಒಂದು ಲಕ್ಷ ರೂಪಾಯಿ ತಾತ್ಕಾಲಿಕ ಪರಿಹಾರ ನೀಡಬೇಕು ಎಂದು ಅವರು ಸೂಚಿಸಿದ್ದಾರೆ.

ನೋಟಿಸ್ ಕೂಡ ನೀಡದೇ ಮನೆ ನೆಲಸಮ ಮಾಡುತ್ತಿರುವುದನ್ನು ಪ್ರಶ್ನಿಸಿ ಶ್ರೀನಾಥ ಹೆಗಡೆ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗಿದೆ. 1978ರಲ್ಲಿ ಈ ಜಾಗವನ್ನು ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT