ಮತ್ತೊಂದು ಪ್ರಕರಣ: ಜ್ಞಾನಭಾರತಿ ಬಳಿಯ ರಾಮಕೃಷ್ಣಪ್ಪ ಬಡಾವಣೆಯಲ್ಲಿ ಭಾನುವಾರ ರಾತ್ರಿ ಪಾನಮತ್ತ ವ್ಯಕ್ತಿಯೊಬ್ಬರು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಕೇರಳ ಮೂಲದ ಉನ್ನಿಸ್ (30) ಮೃತಪಟ್ಟವರು. ರಾಮಕೃಷ್ಣಪ್ಪ ಬಡಾವಣೆಯಲ್ಲಿನ ವಾಣಿಜ್ಯ ಸಮುಚ್ಚಯವೊಂದರಲ್ಲಿ ಚಪ್ಪಲಿ ಅಂಗಡಿ ಇಟ್ಟುಕೊಂಡಿದ್ದ ಅವರು, ಆ ವಾಣಿಜ್ಯ ಸಮುಚ್ಚಯದ ಮಹಡಿಯ ಕೊಠಡಿಯಲ್ಲಿ ವಾಸವಾಗಿದ್ದರು. ಸ್ನೇಹಿತರೊಂದಿಗೆ ರಾತ್ರಿ ಮದ್ಯಪಾನ ಮಾಡಿದ್ದ ಉನ್ನಿಸ್, ಕೊಠಡಿಯ ಮುಂಭಾಗದಲ್ಲಿ ನಡೆದಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.