ನ್ಯಾಯಾಂಗ ಬಂಧನದಲ್ಲೇ ಪೋಲಿಸ್ ನಿಗಾ ಮತ್ತು ಭದ್ರತೆಯಲ್ಲಿ ಭಾರತದ ಯಾವುದೇ ಆಸ್ಪತ್ರೆಯಲ್ಲಿ ಕಟ್ಟಾ ಅವರು ಚಿಕಿತ್ಸೆ ಪಡೆಯುವಂತೆ ನ್ಯಾಯಾಲಯ ಇದೇ ಸಂದರ್ಭದಲ್ಲಿ ಆದೇಶಿಸಿದೆ.
ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಲು ತಮಗೆ ಜಾಮೀನು ನೀಡುವಂತೆ ಕೋರಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಸೋಮವಾರ ಈ ಆದೇಶ ಪ್ರಕಟಿಸಿದರು.
ಆಗಸ್ಟ್ 8 ರಿಂದ ನ್ಯಾಯಾಂಗ ಬಂಧನದಲ್ಲಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯನಾಶ ಮತ್ತು ಸಾಕ್ಷ್ಯಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇರುವುದರಿಂದ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು.
ನಂತರ ಆರೋಗ್ಯದ ಕಾರಣ ನೀಡಿ ಜಾಮೀನು ನೀಡುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಮತ್ತೆ ಅರ್ಜಿ ಸಲ್ಲಿಸಿದ್ದನ್ನು ಸ್ಮರಿಸಬಹುದು.