ನವದೆಹಲಿ (ಐಎಎನ್ಎಸ್): ಪಶ್ಚಿಮ ಬಂಗಾಳದ ಆಡಳಿತರೂಢ ಮಿತ್ರ ಪಕ್ಷಗಳಲ್ಲಿ ಪರಸ್ಪರ ಟೀಕಾಪ್ರಹಾರದಲ್ಲಿ ಮಧ್ಯಪ್ರವೇಶಿಸಿರುವ ಎಐಸಿಸಿ, ಮಿತ್ರ ಪಕ್ಷದ ವಿರುದ್ಧ ಕಠಿಣ ಪದ ಬಳಕೆ ಬೇಡ ಎಂದು ರಾಜ್ಯದ ಕಾಂಗ್ರೆಸ್ ಘಟಕಕ್ಕೆ ಕಿವಿಮಾತು ಹೇಳಿದೆ. ಜೊತೆಗೆ ತೃಣಮೂಲ ಕಾಂಗ್ರೆಸ್ ಸಹ ಇದನ್ನೇ ಅನುಸರಿಸಬೇಕು ಎಂದು ಸಲಹೆ ನೀಡಿದೆ.