ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ವಿ.ವಿ ಡೀನ್ ವಜಾಕ್ಕೆ ನಿರ್ಧಾರ

Last Updated 19 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಹೊಸಪೇಟೆ:  ವಿಶ್ವವಿದ್ಯಾಲಯ ಅನುಮತಿ ಪಡೆಯದೆ ವ್ಯವಹಾರ ಮಾಡಿ, ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಡೀನ್ ಡಾ.ಟಿ.ಆರ್ ಚಂದ್ರಶೇಖರ ಅವರನ್ನು ಸೇವೆಯಿಂದ ವಜಾ ಮಾಡಲು ಸಿಂಡಿಕೇಟ್ ಸಭೆ ನಿರ್ಧರಿಸಿದೆ. 

 ಹಂಪಿ ಕನ್ನಡ ವಿಶ್ವವಿದ್ಯಾಲಯದ ಹೆಸರನ್ನು ದುರ್ಬಳಕೆ ಮಾಡಿಕೊಂಡು, ರಾಯಚೂರು ಜಿಲ್ಲಾ ಪಂಚಾಯ್ತಿಯೊಂದಿಗೆ ರೂ 98 ಲಕ್ಷ  ವ್ಯವಹಾರ ನಡೆಸಿ, ಯಾವುದೇ ಖರ್ಚು ವೆಚ್ಚಗಳ ಮಾಹಿತಿ ನೀಡದ ಆರೋಪಗಳಿಗೆ ಗುರಿಯಾದ ಡಾ. ಚಂದ್ರಶೇಖರ ವಿರುದ್ಧ ಏಕ ಸದಸ್ಯ ಆಯೋಗ ರಚಿಸಿ ತನಿಖೆ ನಡೆಸಲಾಗಿತ್ತು. 

ಚಂದ್ರಶೇಖರ ಆರೋಪಿ ಎಂದು ಆಯೋಗ ನೀಡಿದ ವರದಿಯಿಂದ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾ ಮಾಡಲು ಶುಕ್ರವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT