ಮಕ್ಕಳ ಹೆತ್ತವರು ಇಂತಹ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳನ್ನು ಕನ್ನಡ ಶಾಲೆಯಲ್ಲೇ ವಿದ್ಯಾಭ್ಯಾಸ ನೀಡಬೇಕು’ ಎಂದರು. ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಮಾತನಾಡಿ, ಸುವರ್ಣ ಮಹೋತ್ಸವ ಆಚರಿಸುತ್ತಿರುವ ಶಾಲೆ ಪರಿಸರದ ಮತ್ತಷ್ಟು ಮಂದಿಗೆ ವಿದ್ಯಾಭ್ಯಾಸ ನೀಡುವಂತಾಗಲಿ ಎಂದರು.
ತಾಲ್ಲೂಕಿನ ಮಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾ ಪೂಜಾರ್ತಿ ಧ್ವಜಾರೋಹಣ ಮಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅನಿಲ್ ಎಸ್. ಪೂಜಾರಿ ಅಧ್ಯಕ್ಷತೆಯಲ್ಲಿ ಪ್ರತಿಭಾ ಪುರಸ್ಕಾರ ನಡೆಯಿತು. ರಮೇಶ್ ಚಿಪಳೂಣ್ಕರ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಸುಗುಣಾ ಸುವರ್ಣ ಇದ್ದರು.
ಸುವರ್ಣ ಮಹೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ರವಿಶಂಕರ್ ಶೇರಿಗಾರ್ ಸ್ವಾಗತಿಸಿದರು. ಮುಖ್ಯಶಿಕ್ಷಕಿ ಜೆಸಿಂತಾ ಪಾಯ್ಸ್ ವರದಿ ವಾಚಿಸಿದರು. ದೈಹಿಕ ಶಿಕ್ಷಕ ಜಯಾನಂದ ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಶಿಕ್ಷಕ ಅರವಿಂದ ಬಿ.ಜೋಶಿ ವಂದಿಸಿದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ, ಹಳೆವಿದ್ಯಾರ್ಥಿಗಳಿಂದ ತುಳು ನಾಟಕ ನಡೆದವು.