ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಸಂಘ ಉದ್ಘಾಟನೆ

Last Updated 3 ಏಪ್ರಿಲ್ 2013, 6:24 IST
ಅಕ್ಷರ ಗಾತ್ರ

ರಾಯಚೂರು: ಬೇರೆ ಬೇರೆ ಭಾಷಿಕರ ಸವಾಲು ಎದುರಿಸಿ ಕನ್ನಡ ಭಾಷೆಯನ್ನು ರಕ್ಷಣೆ ಮಾಡಿ ಆರಾಧಿಸಬೇಕು ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಡಾ.ಐ.ಜೆ ಮ್ಯಾಗೇರಿ ಹೇಳಿದರು.

ಮಂಗಳವಾರ ಇಲ್ಲಿನ ಎಸ್‌ಆರ್‌ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ಧ ಕನ್ನಡ ಸಂಘ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸಂಸ್ಕೃತಿ ಸಮೃದ್ಧವಾಗಿದೆ. ಕನ್ನಡ ಉಳಿಸಿ ಬೆಳೆಸೋಣ. ಕನ್ನಡ ಮನೆಯಲ್ಲಿ ಬದುಕೋಣ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ಧ ಸಂಸ್ಥೆಯ ಅಧ್ಯಕ್ಷ ಎ ಪಾಪಾರೆಡ್ಡಿ ಮಾತನಾಡಿ, ಮಕ್ಕಳಲ್ಲಿ ನಾಡು, ದೇಶಭಕ್ತಿ ಬೆಳೆಸಬೇಕು ಎಂದು ನುಡಿದರು.
ಟ್ಯಾಗೋರ ಪಾಲಿಟೆಕ್ನಿಕ್ ಕಾಲೇಜಿನ ಅಧ್ಯಕ್ಷ ದರೂರ ಬಸವರಾಜ ಪಾಟೀಲ್, ಸಂಸ್ಥೆಯ ಸದಸ್ಯ ಜಿ ಶಿವಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜಿನ ಪ್ರಾಚಾರ್ಯ ಆಶಾ ಪ್ರೇಮಲತಾ ಸ್ವಾಗತಿಸಿದರು. ರಮೇಶ ಎಚ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಡಾ.ಐ.ಜೆ ಮ್ಯಾಗೇರಿ ಅವರನ್ನು ಸತ್ಕರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT