ಬೆಂಗಳೂರು: ಇದೇ 29ರಿಂದ ಎರಡು ದಿನಗಳ ಕಾಲ ನಡೆಯುವ ಕೇರಳ ರಾಜ್ಯ 5ನೇ ಕನ್ನಡ ಸಮ್ಮೇಳನ ಮತ್ತು ಕೇರಳ - ಕರ್ನಾಟಕ ಉತ್ಸವದ ಸರ್ವಾಧ್ಯಕ್ಷರಾಗಿ ಕೆಎಎಸ್ ಅಧಿಕಾರಿ ಡಾ.ಮನು ಬಳಿಗಾರ ಆಯ್ಕೆಯಾಗಿದ್ದಾರೆ ಎಂದು ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.
ವರ್ಗಾವಣೆ
ಬೆಂಗಳೂರು: ಐಎಫ್ಎಸ್ ಅಧಿಕಾರಿ ರಾಮಚಂದ್ರ ಅವರನ್ನು `ಕಿಯೊನಿಕ್ಸ್'ನ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.