ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ: ಕರ್ನಾಟಕ ತಂಡಗಳಿಗೆ ಪ್ರಶಸ್ತಿ

Last Updated 23 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಪುರುಷರ ತಂಡ ಹೈದರಾಬಾದ್‌ನಲ್ಲಿ ಮುಕ್ತಾಯಗೊಂಡ ದಕ್ಷಿಣ ವಲಯ ಸೀನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ವಿರೋಚಿತ ಗೆಲುವು ದಾಖಲಿಸಿ, ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಭಾನುವಾರ ರಾತ್ರಿ ಇಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ರಾಜ್ಯ ತಂಡ 12–11 ಪಾಯಿಂಟ್‌ಗಳಿಂದ ಸರ್ವೀಸಸ್ ತಂಡವನ್ನು ಮಣಿಸಿತು.

ರೋಚಕವಾಗಿದ್ದ ಪಂದ್ಯದ ಮೊದಲಾರ್ಧದಲ್ಲಿ 7–6 ಪಾಯಿಂಟ್‌ಗಳಿಂದ ಮುನ್ನಡೆ ಗಳಿಸಿದ್ದ ತಂಡ ಅಂತಿಮವಾಗಿ ಒಂದು ಅಂಕದಿಂದ ಜಯ ಸಾಧಿಸಿ ಸಂಭ್ರಮಿಸಿತು. ತಂಡದ ಪರ ಸಬೀರ್, ಪ್ರಶಾಂತ್, ಜೀವ ಕುಮಾರ್ ಮತ್ತು ರಘುನಂದನ್  ಉತ್ತಮ ಆಟ ಪ್ರದರ್ಶಿಸುವ ಮೂಲಕ ಗೆಲುವಿನ ರೂವಾರಿಗಳೆನಿಸಿದರು.

ಮಹಿಳೆಯರ ವಿಭಾಗದ ಫೈನಲ್ ಸೆಣಸಾಟದಲ್ಲಿ ಕರ್ನಾಟಕದ ಮಹಿಳಾ ತಂಡ 40–30 ಪಾಯಿಂಟ್‌ಗಳಿಂದ ಆಂಧ್ರಪ್ರದೇಶ ತಂಡವನ್ನು ಪರಾಭವಗೊಳಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು. ತಂಡದ ಪರ ಜಯಂತಿ, ಸುಶ್ಮಿತಾ ಪವಾರ್, ಉಷಾ ಹಾಗೂ ರಂಜಿತಾ ಪ್ರಭಾವಿ ಪ್ರದರ್ಶನ ತೋರಿದರು.

ಪುರುಷರ ತಂಡದ ಸಬೀರ್ ಉತ್ತಮ ರೈಡರ್, ರಾಜಗುರು ಉತ್ತಮ ಕ್ಯಾಚರ್ ಹಾಗೂ ಮಹಿಳಾ ತಂಡದ ಜಯಂತಿ ಉತ್ತಮ ಆಲ್‌ರೌಂಡರ್ ಪ್ರಶಸ್ತಿ ತಮ್ಮದಾಗಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT