ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ: ಫೈನಲ್‌ಗೆ ಕರ್ನಾಟಕ

Last Updated 12 ಜನವರಿ 2012, 19:30 IST
ಅಕ್ಷರ ಗಾತ್ರ

ಧಾರವಾಡ: ಕರ್ನಾಟಕ ಹಾಗೂ ಹರಿಯಾಣದ ಬಾಲಕ-ಬಾಲಕಿಯರ ತಂಡಗಳೆರಡೂ ಇಲ್ಲಿಯ ಪೊಲೀಸ್ ವಸತಿ ಶಾಲೆ ಮೈದಾನದಲ್ಲಿ ನಡೆದಿರುವ 57ನೇ ರಾಷ್ಟ್ರೀಯ 17 ವರ್ಷದೊಳಗಿನವರ ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟವು.

ಕರ್ನಾಟಕದ ಬಾಲಕಿಯರು ತೀವ್ರ ತುರುಸಿನಿಂದ ಕೂಡಿದ್ದ ಸೆಮಿ ಫೈನಲ್ ಪಂದ್ಯದಲ್ಲಿ 7-4 (3-1)ರಿಂದ ಪಶ್ಚಿಮ ಬಂಗಾಲ ತಂಡವನ್ನು ಪರಾಭವಗೊಳಿಸಿದರು. ಎರಡೂ ತಂಡಗಳು ರಕ್ಷಣೆಗೆ ಒತ್ತು ನೀಡಿದ್ದರಿಂದ ಪಾಯಿಂಟ್ ಗಳಿಕೆಗೆ ತೀವ್ರ ತಿಣುಕಾಟ ನಡೆಯಿತು.

ವಿರಾಮದ ವೇಳೆಗೆ ಕೇವಲ 3-1ರಿಂದ ಮುಂದಿದ್ದ ಕರ್ನಾಟಕ, ಅಂತಿಮವಾಗಿ 7-4ರಿಂದ ಪಂದ್ಯವನ್ನು ಜಯಿಸಿದಾಗ ರಾಜ್ಯದ ಆಟಗಾರ್ತಿಯರ ಸಂಭ್ರಮ ಎಲ್ಲೆ ಮೀರಿತ್ತು. ಕರ್ನಾಟಕ ತಂಡದ ಗೆಲುವಿನಲ್ಲಿ ಶರಧಿ ಮತ್ತು ರಕ್ಷಿತಾ ಮಿಂಚಿದರು.

ಇನ್ನೊಂದು ಸೆಮಿ ಫೈನಲ್‌ನಲ್ಲಿ ಹರಿಯಾಣ ತಂಡ 11-10 (4-2)ರಿಂದ ಮಹಾರಾಷ್ಟ್ರ ವಿರುದ್ಧ ರೋಚಕ ಗೆಲುವು ಸಾಧಿಸಿತು. ಶುಕ್ರವಾರ ಬೆಳಿಗ್ಗೆ ನಡೆಯಲಿರುವ ಫೈನಲ್‌ನಲ್ಲಿ ಕರ್ನಾಟಕ ತಂಡ ಹರಿಯಾಣ ತಂಡದೊಂದಿಗೆ ಮುಖಾಮುಖಿಯಾಗಲಿದೆ.

ಬಾಲಕರ ವಿಭಾಗದ ಸೆಮಿಫೈನಲ್‌ನಲ್ಲಿ ಕರ್ನಾಟಕ ತಂಡ 27-10 (16-4)ರಿಂದ ಪಶ್ಚಿಮ ಬಂಗಾಲ ತಂಡಕ್ಕೆ ಸೋಲುಣಿಸಿತು. ಇನ್ನೊಂದು ಸೆಮಿಫೈನಲ್‌ನಲ್ಲಿ ಹರಿಯಾಣ ತಂಡ 18-15 (12-8)ರಿಂದ ಛತ್ತೀಸ್‌ಗಡ ತಂಡದ ವಿರುದ್ಧ ಜಯ ಸಾಧಿಸಿತು. ಕರ್ನಾಟಕ ಮತ್ತು ಹರಿಯಾಣ ತಂಡಗಳು ಶುಕ್ರವಾರ ಪ್ರಶಸ್ತಿಗಾಗಿ ಸೆಣಸಲಿವೆ.

ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಕರ್ನಾಟಕ ತಂಡ 41-15 (27-7)ರಿಂದ ಕೇರಳ ತಂಡವನ್ನು; ಹರಿಯಾಣ ತಂಡ 26-4 (4-1)ರಿಂದ ಹಿಮಾಚಲ ಪ್ರದೇಶ ತಂಡವನ್ನು ಸೋಲಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT