ಬೆಂಗಳೂರು: ಕೆಲಸ ಮಾಡುತ್ತಿದ್ದ ವೇಳೆ ಕಬ್ಬಿಣದ ತುಂಡು ತಲೆಯ ಮೇಲೆ ಬಿದ್ದು ಸಂಪತ್ (23) ಎಂಬುವರು ಸಾವನ್ನಪ್ಪಿರುವ ಘಟನೆ ಪೀಣ್ಯದ ಒಂದನೇ ಹಂತದಲ್ಲಿರುವ ಖಾಸಗಿ ಕಂಪೆನಿಯಲ್ಲಿ ಶನಿವಾರ ನಡೆದಿದೆ.
ಮಾಗಡಿಯವರಾದ ಸಂಪತ್, ಎರಡೂವರೆ ತಿಂಗಳ ಹಿಂದಷ್ಟೇ ಕಂಪೆನಿಗೆ ಟ್ರೈನಿಯಾಗಿ ಕೆಲಸಕ್ಕೆ ಸೇರಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಅವರು ಕಬ್ಬಿಣದ ತುಂಡನ್ನು ಸ್ಥಳಾಂತರಿಸುತ್ತಿದ್ದಾಗ ಆಕಸ್ಮಿಕವಾಗಿ ಕಬ್ಬಿಣದ ತುಂಡು ತಲೆಯ ಮೇಲೆ ಬಿದ್ದ ಪರಿಣಾಮ ಅವರು ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಸಹ ಕಾರ್ಮಿಕರು ಅವರನ್ನು ಆಸ್ಪತ್ರೆಗೆ ಕೊಂಡೊಯ್ದರಾದರೂ, ಮಾರ್ಗ ಮಧ್ಯೆ ಸಂಪತ್ ಸಾವನ್ನಪ್ಪಿದ್ದರು ಎಂದು ಪೊಲೀಸರು ಹೇಳಿದ್ದಾರೆ.