ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬಿನ ದರ: 9ರಂದು ಮತ್ತೆ ಸಭೆ

Last Updated 5 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಕಬ್ಬಿನ ದರ ನಿರ್ಧಾರಕ್ಕೆ ಸಂಬಂ­ಧಿಸಿದಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಡಿ. 9ರಂದು ಸಭೆ ನಡೆಸಲಿದ್ದೇನೆ. ಆ ಸಭೆಯಲ್ಲಿ ಗೊಂದಲಗಳು ನಿವಾರಣೆಯಾಗಲಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ನ್ಯಾನೊ ತಂತ್ರಜ್ಞಾನ ಸಮ್ಮೇಳನ­ದಲ್ಲಿ ಪಾಲ್ಗೊಂಡಿದ್ದ ಅವರು,ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.

‘ಸರ್ಕಾರ ನಿಗದಿ ಮಾಡಿದ ದರ ನೀಡಲು ಹಲವು ಕಾರ್ಖಾನೆಗಳ ಮಾಲೀಕರು ಈಗಾಗಲೇ ಸಮ್ಮತಿ ಸೂಚಿಸಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ ಈ ವಿಷಯ­ವಾಗಿ ಹೆಚ್ಚಿನ ಪ್ರತಿಕ್ರಿಯೆ ನೀಡಲಾರೆ. ಆದರೆ, ಡಿ. 9ರಂದು ನಡೆಯುವ ಸಭೆಯಲ್ಲಿ ಎಲ್ಲ ಗೊಂದಲ­ಗಳಿಗೆ ತೆರೆ ಬೀಳಲಿದೆ’ ಎಂದು ಹೇಳಿದರು.

‘ಕಬ್ಬಿನ ವಿಷಯವಾಗಿ ಚರ್ಚಿಸಲು ನವದೆಹಲಿಯಲ್ಲಿ ಡಿ. 6ರಂದು ಪ್ರಧಾನ ಮಂತ್ರಿ­ಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆ­ದಿ­ದ್ದಾರೆ. ಆ ಸಭೆಯಲ್ಲಿ ಭಾಗವಹಿಸಲಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT