ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರವೇ ಅಧ್ಯಕ್ಷರಿಂದ ಜೀವ ಬೆದರಿಕೆ

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಮತ್ತು ಸಂಘಟನೆಯ ಪದಾಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಗ್ರಹಾರ ದಾಸರಹಳ್ಳಿ ನಿವಾಸಿ ನಾಗರಾಜ್ ಎಂಬುವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

`ಕೊಲೆ ಮಾಡುವುದಾಗಿ ಮತ್ತು ನನ್ನ ಗ್ಯಾಸ್ ಏಜೆನ್ಸಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ~ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ನಾರಾಯಣಗೌಡ, ಮೋಹನ್, ನಾಗೆಂದ್ರ ಬಾಬು, ಕೀರ್ತಿ ಸೇರಿದಂತೆ ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
 
ಈ ಬಗ್ಗೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿದ್ದ ನಾಗರಾಜ್ ಅವರು ಹುದ್ದೆಗೆ ಕೆಲ ದಿನಗಳ ಹಿಂದೆ ರಾಜೀನಾಮೆ ನೀಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT