ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರವೇ ದಶಮಾನೋತ್ಸವ ಸಂಭ್ರಮ

Last Updated 1 ಜೂನ್ 2011, 9:15 IST
ಅಕ್ಷರ ಗಾತ್ರ

ತುಮಕೂರು: ಕನ್ನಡ ಭಾಷೆಯು ಕನ್ನಡ ಪರ ಸಂಘಟನೆಗಳಿಂದ ಉಳಿದಿದೆ ವಿನಃ ಸರ್ಕಾರದಿಂದ ಅಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು.

ನಗರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡ ಮಾತನಾಡಲು ಹಿಂಜರಿಕೆ ಬೇಡ ಎಂದರು.

ಕರವೇ ರಾಜ್ಯದಲ್ಲಿ 18 ಸಾವಿರ ಶಾಖೆ ಹೊಂದಿದ್ದು, 62 ಲಕ್ಷ ಸದಸ್ಯರು ಇದ್ದಾರೆ. ಕನ್ನಡ ಭಾಷೆ, ನೆಲ, ಜಲದ ಉಳಿವಿಗಾಗಿ ಸತತವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಸಿ. ಸೋಮಶೇಖರ್, ತುಮಕೂರು ವಿ.ವಿ. ಮೌಲ್ಯಮಾಪನಾ ವಿಭಾಗದ ಕುಲಸಚಿವ ಪ್ರೊ.ಲಕ್ಷ್ಮೀಕಾಂತ್ ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಆರ್.ಸುರೇಶ್, ಜಿಲ್ಲಾ ಗೆಳೆಯರ ಬಳಗದ ಅಧ್ಯಕ್ಷ ಗೋವಿಂದರಾಜು, ಜೆಡಿಎಸ್ ಮುಖಂಡ ಎಲ್.ಪುಟ್ಟೀರಪ್ಪ, ಗುತ್ತಿಗೆದಾರ ನರಸೇಗೌಡ, ಸೌರಭ ನರ್ಸಿಂಗ್ ಹೋಂನ ಸೌಭಾಗ್ಯ ರತ್ನ ಇದ್ದರು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗೋವಿಂದರಾಜು, ಟಿ.ವಿ.ರಾಜು, ನಟರಾಜ, ಡೇವಿಡ್, ಬಸವರಾಜು, ಭೋಗನರಸಿಂಹ, ರವೀಂದ್ರ,ಬಾಬು ಅವರನ್ನು ಸನ್ಮಾನಿಸಲಾಯಿತು. ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಶಿಲ್ಪಕಲಾ, ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕಗಳಿಸಿದ ಸುಮುಖ್ ವಿ.ಮಾಕಂ ಅವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT