ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ ಸೌಹಾರ್ದ ಸಂಘರ್ಷ ಸಮಿತಿ ಅಸ್ತಿತ್ವಕ್ಕೆ

Last Updated 22 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಮಂಗಳೂರು: ಕರಾವಳಿಯಲ್ಲಿ ಸಂಸ್ಕೃತಿ ರಕ್ಷಣೆ ಹೆಸರಿನಲ್ಲಿ ಸಂಘ ಪರಿವಾರದ ಗುಂಪುಗಳು ಕಾನೂನು ಕೈಗೆತ್ತಿಕೊಳ್ಳುವುದನ್ನು, ಕೋಮುದ್ವೇಷ ಹರಡುವುದನ್ನು ತಡೆಯುವ ಉದ್ದೇಶದಿಂದ `ಸೌಹಾರ್ದಕ್ಕಾಗಿ ಸಂಘರ್ಷ~ ಎಂಬ ಧ್ಯೇಯದೊಂದಿಗೆ `ಕರಾವಳಿ ಸೌಹಾರ್ದ ಸಂಘರ್ಷ ಸಮಿತಿ~ ಅಸ್ತಿತ್ವಕ್ಕೆ ಬಂದಿದೆ.

ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಸಮಿತಿಯ ಅಧ್ಯಕ್ಷ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ, `ಹೋಂ ಸ್ಟೇ ಮೇಲಿನ ದಾಳಿ ವಿರೋಧಿಸಿ ಸಮಿತಿ ನೇತೃತ್ವದಲ್ಲಿ ಸೆ.4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ‌್ಯಾಲಿ ಹಾಗೂ ಪ್ರತಿಭಟನಾ ಸಭೆ ನಡೆಯಲಿದೆ. ಈ ಸಂಘಟನೆ ಕೇವಲ ಹೋಂ ಸ್ಟೇ ಮೇಲಿನ ದಾಳಿಯನ್ನು ವಿರೋಧಿಸುವ ಸಲುವಾಗಿ ಹುಟ್ಟಿಕೊಂಡಿದ್ದಲ್ಲ. ಇಂತಹ ದಾಳಿ ಮರುಕಳಿಸುವುದನ್ನು ತಡೆಯುವುದು ನಮ್ಮ ಮುಖ್ಯ ಉದ್ದೇಶ.   ಎಂದರು.

ಸಿಪಿಎಂ ಮುಖಂಡ ಬಿ.ಮಾಧವ ಮಾತನಾಡಿ, `ಸರ್ಕಾರದ ಬೆಂಬಲದಿಂದಲೇ ಸಂಘ ಪರಿವಾರ ಇಂತಹ ಪುಂಡಾಟಿಕೆ ನಡೆಸುತ್ತಿದೆ. ಇಂತಹ ಕೃತ್ಯಗಳ ವಿರುದ್ಧ ರಾಜಕೀಯೇತರವಾಗಿ ಜನಜಾಗೃತಿ ಮೂಡಿಸುತ್ತೇವೆ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT