ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಿಬಸವೇಶ್ವರ ಗದ್ದುಗೆ ರಥೋತ್ಸವ

Last Updated 23 ಫೆಬ್ರುವರಿ 2012, 8:00 IST
ಅಕ್ಷರ ಗಾತ್ರ

ಚಿತ್ರದುರ್ಗ: ನಗರದ ಜೋಗಿಮಟ್ಟಿ ರಸ್ತೆಯಲ್ಲಿ ಬುಧವಾರ ಕರಿಬಸವೇಶ್ವರ ಗದ್ದುಗೆ ರಥೋತ್ಸವ ಸಂಭ್ರಮದಿಂದ ನಡೆಯಿತು.

ಬುಧವಾರ ಬೆಳಿಗ್ಗೆ ಗಂಗಾಪೂಜೆ,  ಅಭಿಷೇಕ, ಹೋಮ ಹವನ ಕಾರ್ಯಕ್ರಮಗಳು ನಡೆದವು. ನಂತರ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಕರಿಬಸವೇಶ್ವರ ಸ್ವಾಮಿ ಮತ್ತು ಗಾಯತ್ರಿ ದೇವಿಯ ಪಲ್ಲಕ್ಕಿ ಉತ್ಸವ ನಡೆಯಿತು. ಬಳಿಕ ಸಕಲ ವೈಭವಗಳೊಂದಿಗೆ ರಥೋತ್ಸವ ನಡೆಯಿತು.

ರಥೋತ್ಸವದಲ್ಲಿ ಡೊಳ್ಳು ಕುಣಿತ ಹಾಗೂ ವಿವಿಧ ಜನಪದ ಕಲಾ ತಂಡಗಳು ಪಾಲ್ಗೊಂಡಿದ್ದವು. ನಗರಸಭೆ ಸದಸ್ಯ ಮಹೇಶ್ ಹಾಗೂ ಮದಕರಿ ಯುವಕ ಸಂಘದ ಗಿರೀಶ್, ಮಹೇಶ್, ರಮೇಶ್, ಬಾಬು ಮತ್ತಿತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT