ಬೆಂಗಳೂರು (ಪಿಟಿಐ): ರಾಜ್ಯದಾದ್ಯಂತ ಏಳು ಮಂದಿ ಸರ್ಕಾರಿ ಅಧಿಕಾರಿಗಳ ಆವರಣಗಳ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ ಎಂದು ಲೋಕಾಯುಕ್ತದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ ಸೇರಿದಂತೆ ಒಟ್ಟು 22 ಕಡೆಗಳಲ್ಲಿ ದಾಳಿ ನಡೆದಿದೆ ಎಂದು ಲೋಕಾಯುಕ್ತ ಎಡಿಜಿಪಿ ಸತ್ಯ ನಾರಾಯಣರಾವ್ ಹೇಳಿದರು.
'ದಾಳಿ ಕಾರ್ಯಾಚರಣೆ ಇನ್ನೂ ಮುಂದುವರಿದೆ' ಎಂದು ಅವರು ತಿಳಿಸಿದರು.