ಬೆಂಗಳೂರು: ಸುಬ್ಬರಾಮಯ್ಯ ಫೈನ್ ಆರ್ಟ್ಸ್ ಟ್ರಸ್ಟ್ ಸೋಮವಾರ ಜ್ಯೋತಿ ಅವರ ಸ್ಮರಣಾರ್ಥವಾಗಿ ನಗರದಲ್ಲಿ ರಾಜ್ಯಮಟ್ಟದ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯನ್ನು ಆಯೋಜಿಸಿತ್ತು.
ಟ್ರಸ್ಟ್ನ ಅಧ್ಯಕ್ಷ ಬಿ.ಎನ್. ವಿ. ಸುಬ್ರಹ್ಮಣ್ಯ ಉದ್ಘಾಟಿಸಿದರು. ಸ್ಪರ್ಧೆಯಲ್ಲಿ 15 ವರ್ಷದೊಳಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತೀರ್ಪುಗಾರರಾಗಿ ವಿದುಷಿ ರಾಜಲಕ್ಷ್ಮಿ ತಿರುನಾರಾಯಣ್, ವಿದ್ವಾನ್ ಎಚ್.ಎಸ್. ಸುಧೀಂದ್ರ ಭಾಗವಹಿಸಿದ್ದರು.