ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಶುಭಾರಂಭ

Last Updated 20 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ತಂಡದವರು ಇಲ್ಲಿ ಆರಂಭವಾದ 11ನೇ ಅಖಿಲ ಭಾರತ ಬಿಎಸ್‌ಎನ್‌ಎಲ್ ವಾಲಿಬಾಲ್ ಟೂರ್ನಿಯ `ಎ~ ಗುಂಪಿನ ಮೊದಲ ಪಂದ್ಯದಲ್ಲಿ ಶುಭಾರಂಭ ಮಾಡಿದರು.

ಕಂಠೀರವ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಕರ್ನಾಟಕ 25-7, 25-9, 25-16 ಪಾಯಿಂಟುಗಳಿಂದ ದೆಹಲಿಯ ಎಂಟಿಎನ್‌ಎಲ್ ತಂಡವನ್ನು ಮಣಿಸಿತು. ಆತಿಥೇಯ ತಂಡ ಮೂರನೇ ಸೆಟ್‌ನಲ್ಲಿ ಅಲ್ಪ ಪ್ರತಿರೋಧ ಎದುರಿಸಿತು.

`ಬಿ~ ಗುಂಪಿನ ಪಂದ್ಯದಲ್ಲಿ ತಮಿಳುನಾಡು 25-16, 25-16, 25-12ರಲ್ಲಿ ಉತ್ತರಖಾಂಡದ ಎದುರು ಗೆಲುವು ಸಾಧಿಸಿತು. `ಸಿ~ ಗುಂಪಿನಲ್ಲಿ ಬಿಹಾರ 25-15, 24-26. 25-12, 25-16ರಲ್ಲಿ ಕೇರಳ ತಂಡವನ್ನು ಸೋಲಿಸಿತು.

ಉದ್ಘಾಟನೆ: ಸೋಮವಾರ ಬಿಎಸ್‌ಎನ್‌ಎಲ್ ಕರ್ನಾಟಕ ವಲಯದ ಸಿಜೆಎಂ ಪಿ. ರಾಘವನ್ ಟೂರ್ನಿಗೆ ಚಾಲನೆ ನೀಡಿದರು. ಬೆಂಗಳೂರು ಜಿಲ್ಲೆಯ ಜನರಲ್ ಮ್ಯಾನೇಜರ್ ಶುಭೇಂದು ಘೋಷ್, ಕರ್ನಾಟಕ ರಾಜ್ಯ ವಾಲಿಬಾಲ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಕೆ. ನಂದ ಕುಮಾರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT