ನವದೆಹಲಿ (ಪಿಟಿಐ): ಕಾಮನ್ವೆಲ್ತ್ ಕ್ರೀಡಾಕೂಟದ ರೂ 600 ಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿಬಿಐನಿಂದ ಬಂಧಿತರಾಗಿದ್ದ ಶೇಖರ್ ದೇವ್ರುಖರ್ ಅವರನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ (ಮಾರ್ಚ್ 5ರವರೆಗೆ) ಒಪ್ಪಿಸಿದ್ದು, ತಿಹಾರ್ ಜೈಲಿಗೆ ಕಳುಹಿಸಿದೆ. ಇವರು ಸಂಘಟನಾ ಸಮಿತಿ ಮಾಜಿ ಮುಖ್ಯಸ್ಥ ಸುರೇಶ್ ಕಲ್ಮಾಡಿ ಆಪ್ತರು ಮತ್ತು 5ನೇ ಬಂಧಿತ ಅಧಿಕಾರಿಯಾಗಿದ್ದಾರೆ.