ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಮಂಟಪಕ್ಕೆ ಕನ್ನ: ರೂ ಎರಡು ಲಕ್ಷ ಕಳವು

Last Updated 1 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಲ್ಯಾಣ ಮಂಟಪ ಪ್ರವೇಶಿಸಿದ ದುಷ್ಕರ್ಮಿಗಳು ಅಲ್ಮೇರಾದಲ್ಲಿದ್ದ ಎರಡು ಲಕ್ಷ ರೂಪಾಯಿ ಕಳವು ಮಾಡಿರುವ ಘಟನೆ ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಘಟನೆ ಸಂಬಂಧ ಕಲ್ಯಾಣ ಮಂದಿರದ ವ್ಯವಸ್ಥಾಪಕ ಜಗನ್ನಾಥ್ ದೂರು ನೀಡಿದ್ದು, ಕಲ್ಯಾಣ ಮಂಟಪವನ್ನು ಬಾಡಿಗೆ ನೀಡುವುದಾಗಿ ಐದು ಜನರಿಂದ ಎರಡು ಲಕ್ಷ ರೂಪಾಯಿ ಮುಂಗಡ ಹಣ ಪಡೆದು ಅಲ್ಮೆರಾದಲ್ಲಿ ಇಟ್ಟಿದ್ದೆ.

ಮಂಗಳವಾರ ಬೆಳಿಗ್ಗೆ ಕಲ್ಯಾಣ ಮಂಟಪಕ್ಕೆ ಬಂದಾಗ ಅಲ್ಮೆರಾದ ಬಾಗಿಲು ತೆರೆದಿತ್ತು. ಆದರೆ ಅದರಲ್ಲಿ ಹಣವಿರಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು. ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT