ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ಸರ್ಕಾರವೇ ನಾಪತ್ತೆ ಮಾಡಿಸಿದೆ ಎಂಬ ವಿರೋಧ ಪಕ್ಷಗಳು ಆರೋಪದಲ್ಲಿ ಹುರುಳಿಲ್ಲ ಎಂದು ಸಿಂಗ್ ತಿಳಿಸಿದರು,
ನಾಪತ್ತೆಯಾಗಿರುವ ಕಡತಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಸಿಬಿಐ ನಿರತವಾಗಿದೆ ಎಂದು ಸಿಂಗ್ ವಿವರಿಸಿದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರೆಸಿದೆ. ಚಳಿಗಾಲದ ಅಧಿವೇಶದ ವೇಳೆಗೆ ತನಿಖೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವನ್ನು ಸಿಂಗ್ ವ್ಯಕ್ತಪಡಿಸಿದರು.
ನಾಳೆಯಿಂದ ಆರಂಭವಾಗಲಿರುವ ಜಿ-20ರ ಶೃಂಗ ಸಭೆಯಲ್ಲಿ ಭಾಗವಹಿಸಲು ಇಂದು ರಾತ್ರಿ ಸಿಂಗ್ ರಷ್ಯಾಗೆ ತೆರಳಲಿದ್ದಾರೆ.