ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಪೆ ಆಹಾರ ನಿರಾಕರಿಸಿದ ವಿದ್ಯಾರ್ಥಿಗಳು

Last Updated 24 ಡಿಸೆಂಬರ್ 2013, 7:20 IST
ಅಕ್ಷರ ಗಾತ್ರ

ಧಾರವಾಡ: ಇಲ್ಲಿಯ ಸಪ್ತಾಪುರದಲ್ಲಿ ಬಿಸಿಎಂ ಇಲಾಖೆ ನಡೆಸುತ್ತಿರುವ ವಿದ್ಯಾ­ರ್ಥಿ­ಗಳ ವಸತಿ ನಿಲಯದಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಸೋಮ­ವಾರ ರಾತ್ರಿ ಊಟ ಬಿಟ್ಟು ಪ್ರತಿಭಟನೆ ನಡೆಸಿದರು.

‘ಕಳೆದ ಹಲವು ತಿಂಗಳುಗಳಿಂದ ಕಲಬೆರಕೆ ಆಹಾರ ನೀಡಲಾಗುತ್ತಿದೆ. ಬಿಸಿ ಊಟದೊಂದಿಗೆ ತಂಗಳನ್ನವನ್ನು ಸೇರಿಸಿ ನೀಡಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪರಿ­ಸ್ಥಿತಿ ಸುಧಾರಿಸಿಲ್ಲ’ ಎಂದು ವಿದ್ಯಾರ್ಥಿ­ಗಳು ಆರೋಪಿಸಿದರು.

‘ಹಲವು ಬಾರಿ ಹಳಸಿದ ಅನ್ನವನ್ನು ನೀಡಲಾಗುತ್ತಿದ್ದು, ಕೊಳೆತ ತರಕಾರಿ­ಯನ್ನೂ ಅಡುಗೆಯಲ್ಲಿ ಬಳಸಲಾಗು­ತ್ತಿದೆ. ಆ ಕುರಿತು ಪ್ರಶ್ನಿಸಿದವರ ವಿರುದ್ಧ ಅಡುಗೆಯವರು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.

ಸೋಮವಾರ ರಾತ್ರಿ ಕಳಪೆ ಆಹಾರ ನೀಡಿದ್ದರಿಂದ ಕೆಲ ವಿದ್ಯಾರ್ಥಿಗಳು ಊಟ ಮಾಡದೇ ಮಲಗಿದರು.

ಸಮಸ್ಯೆ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಸಿದ್ಧಲಿಂಗಯ್ಯ ಹಿರೇ­ಮಠ, ‘ಈ ಬಗ್ಗೆ ನಾನು ಅಡುಗೆ­ಯವರಿಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಆದರೂ ಒಮ್ಮೊಮ್ಮೆ ಹೀಗಾಗುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳೂ ಗಮನಕ್ಕೆ ತಂದಿದ್ದಾರೆ. ಆದರೂ, ಮಧ್ಯಾಹ್ನ ಮಾಡಿದ ಅಡುಗೆಯನ್ನು ರಾತ್ರಿ ಊಟ ಮಾಡಲು ಕಷ್ಟವೇನು? ನಾನು ನಮ್ಮ ಮನೆಯಲ್ಲಿ ಮಧ್ಯಾಹ್ನ ಮಾಡಿದ ಅನ್ನವನ್ನೇ ಊಟ ಮಾಡಿದೆ’ ಎಂದರು. ವಿದ್ಯಾರ್ಥಿಗಳು ನಂತರ ಜಿಲ್ಲಾಧಿಕಾರಿ ನಿವಾಸದ ಎದುರು ಪ್ರತಿಭಟನೆ ನಡೆಸಿ­ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT