ತಮ್ಮ ದೀರ್ಘ ಕಾಲದ ರಾಜಕೀಯ ಜೀವನದಲ್ಲಿ ಅನೇಕ ವಿಶೇಷತೆಗಳನ್ನು ಹೊಂದಿರುವ ಸಂಸದರಲ್ಲಿ ಅಟಲ್ ಬಿಹಾರಿ ವಾಜಪೇಯಿ ಒಬ್ಬರು. ಲೋಕಸಭೆಗೆ ಒಂಬತ್ತು ಸಲ, ರಾಜ್ಯ ಸಭೆಗೆ ಎರಡು ಸಲ ಗೆದ್ದು ಬಂದ ಅವರು ಮೊದಲಿನಿಂದಲೂ ಸೈದ್ಧಾಂತಿಕ ರಾಜಕೀಯದಲ್ಲಿ ವಿಶ್ವಾಸವಿರಿಸಿದವರು.
ಆರೆಸ್ಸೆಸ್ ಹಿನ್ನೆಲೆಯ ವಾಜಪೇಯಿ, ಅದರ ಅಂಗ ಸಂಸ್ಥೆ ಜನಸಂಘದಲ್ಲಿ ಮೊದಲು ಸೇವೆ ಸಲ್ಲಿಸಿದರು. ಜನಸಂಘದ ಸ್ಥಾಪಕ ಡಾ.ಶಾಮಾ ಪ್ರಸಾದ್ ಮುಖರ್ಜಿ ಅವರ ಒಡನಾಡಿಯಾಗಿದ್ದ ಅವರು ಕಾಶ್ಮೀರ ಕುರಿತ ಹೋರಾಟದಲ್ಲಿ ಭಾಗವಹಿಸಿದ್ದರು. 1957ರಲ್ಲಿ ಲೋಕಸಭೆಗೆ ಮೊದಲ ಸಲ ಬಲರಾಂಪುರದಿಂದ ಆಯ್ಕೆಯಾದರು. ಉತ್ತರಪ್ರದೇಶ, ದೆಹಲಿ, ಮಧ್ಯಪ್ರದೇಶ,ಗುಜರಾತಿನಿಂದ ಆಯ್ಕೆಯಾದ ಏಕೈಕ ಸಂಸದೀಯ ಪಟು ಅವರು.