ನವದೆಹಲಿ: ಬೆಂಗಳೂರು ನಗರದ ಘನತ್ಯಾಜ್ಯ ವಿಲೇವಾರಿಗೆ 2012ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊಸದಾಗಿ ಕರೆದಿದ್ದ ಅಂದಾಜು 1200 ಕೋಟಿ ರೂಪಾಯಿ ಮೊತ್ತದ ಟೆಂಡರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.
ಬಿ.ಎಸ್. ಚೌಹಾಣ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ ಬಿ.ಆರ್. ಗಣೇಶ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿದರು. ತ್ಯಾಜ್ಯ ವಿಂಗಡಣೆ, ಸಾಗಣೆ ಮತ್ತು ವಿಲೇವಾರಿಗಾಗಿ 2012ರ ಸೆಪ್ಟೆಂಬರ್ 18ರಂದು ಹೊಸದಾಗಿ ಟೆಂಡರ್ ಕರೆಯಲು ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಗೆ ನೀಡಿತ್ತು.