ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್: ಮುಗಿದ ಚುನಾವಣೆ

Last Updated 21 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 16ರಿಂದ ನಡೆದ 25 ಸಾವಿರ ಯುವ ಕಾಂಗ್ರೆಸ್‌ನ ಬೂತ್ ಸಮಿತಿಗಳ ಚುನಾವಣೆ ಬುಧವಾರ ಅಂತ್ಯಗೊಂಡಿತು. ವಿಧಾನಸಭೆ, ಲೋಕಸಭೆ ಮತ್ತು ಪ್ರದೇಶ ಯುವ ಕಾಂಗ್ರೆಸ್ ಸಮಿತಿಗಳಿಗೆ ಚುನಾವಣೆ ನಡೆಯುವುದು ಬಾಕಿ ಇದ್ದು, ಇದೇ 25ಕ್ಕೆ ನಾಮಪತ್ರ ಸಲ್ಲಿಸಬೇಕಾಗಿದೆ.

26ರಂದು ನಾಮಪತ್ರಗಳ ಪರಿಶೀಲನೆ ಮತ್ತು ಚಿಹ್ನೆ ನೀಡಲಾಗುತ್ತದೆ. ಅದರ ನಂತರ ಅಕ್ಟೋಬರ್ 12 ಮತ್ತು 13ರಂದು ಚುನಾವಣೆ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮೂಲಗಳು ತಿಳಿಸಿವೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಡುತ್ತಿದ್ದು, ಲಾಟರಿ ಮೂಲಕ ಕ್ಷೇತ್ರಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಕೆಲಸ ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ.

ಶ್ರೀನಿವಾಸ್ ಗೆಲುವು: ಡಿ.ಕೆ.ಶಿವಕುಮಾರ್ ಬೆಂಬಲಿತ ಶ್ರೀನಿವಾಸ್ ಅವರು ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಕಮಿಟಿಯಿಂದ ಆಯ್ಕೆಯಾಗಿದ್ದು, ಅವರೂ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT