ಬೆಂಗಳೂರು: `ಭ್ರಷ್ಟಾಚಾರದ ಪಿತಾಮಹರೇ ಕಾಂಗ್ರೆಸ್ಸಿಗರು. ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ~ ಎಂದು ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಟೀಕಿಸಿದರು. ತಮ್ಮ ಬೆಂಬಲಿಗ ಶಾಸಕರ ಜತೆ ವಿಧಾನಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಂಧನ ಸುದ್ದಿಯಿಂದ ಪುಳಕಗೊಂಡು ಕೆಲ ಕಾಂಗ್ರೆಸ್ ನಾಯಕರು ವಿಜಯೋತ್ಸವ ಆಚರಿಸಿದ್ದಾರೆ. ಇದು ಒಳ್ಳೆಯದಲ್ಲ ಎಂದರು.
ಶಾಸಕರಾದ ಬೇಳೂರು ಗೋಪಾಲಕೃಷ್ಣ, ಶಾಸಕರಾದ ಡಿ.ಎನ್.ಜೀವರಾಜ್, ಎಚ್.ಹಾಲಪ್ಪ ಹಾಜರಿದ್ದರು.