ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ಗೆ ರೇವಣ್ಣ ಕಿವಿಮಾತು

Last Updated 6 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಸುವರ್ಣ ವಿಧಾನಸೌಧ (ಬೆಳಗಾವಿ): ಕಾಂಗ್ರೆಸ್ ಮುಖಂಡರು ಸದನದಲ್ಲಿ ಧರಣಿ ಮಾಡುವುದನ್ನು ಬಿಟ್ಟು ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿಯನ್ನು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡಲಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಗುರುವಾರ ಇಲ್ಲಿ ಹೇಳಿದರು.

ದಿನದ ಕಲಾಪ ಮುಂದೂಡಿದ ಬಳಿಕ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, `ಕಾವೇರಿ ವಿಷಯದಲ್ಲಿ ಕಾಂಗ್ರೆಸ್‌ನವರು ರಾಜಕಾರಣ ಮಾಡುತ್ತಿದ್ದಾರೆ' ಎಂದು ಟೀಕಿಸಿದರು.

ವಿಧಾನಸಭೆಯಲ್ಲಿ ಧರಣಿ ಮಾಡುವ ಬದಲು ದೆಹಲಿಗೆ ಹೋಗಿ ಪ್ರಧಾನಿಯನ್ನು ಭೇಟಿ ಮಾಡಲಿ. ಅವರಿಗೆ ವಾಸ್ತವ ಸ್ಥಿತಿ ಏನು? ನೀರು ಇಲ್ಲದಿದ್ದರೆ ಆ ಭಾಗದ ಜನ ದಂಗೆ ಏಳುತ್ತಾರೆ ಎಂಬುದನ್ನು ಕಾಂಗ್ರೆಸ್ ಮುಖಂಡರು ಮನವರಿಕೆ ಮಾಡಲಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT