ನವದೆಹಲಿ (ಪಿಟಿಐ): ಗಗನಸಖಿ ಗೀತಿಕಾ ಶರ್ಮಾ ಅವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹರಿಯಾಣದ ಮಾಜಿ ಸಚಿವ ಗೋಪಾಲ್ ಕಾಂಡಾಗೆ ದೆಹಲಿ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನೀಡಿದೆ.
ಹರಿಯಾಣ ವಿಧಾನಸಭೆ ಅಧಿವೇಶನದ ಹಿನ್ನೆಲೆಯಲ್ಲಿ ಆಕ್ಟೋಬರ್ 4ರವರೆಗೆ ಕಾಂಡಾಗೆ ಮಧ್ಯಂತರ ಜಾಮೀನು ನೀಡಲಾಗಿದೆ.
ಕಳೆದ 13 ತಿಂಗಳಿನಿಂದ ಕಾಂಡ ಜೈಲಿನಲ್ಲಿದ್ದಾರೆ. ಕಾಂಡಾ ಅವರ ವಿಮಾನಯಾನ ಸಂಸ್ಥೆಯಲ್ಲಿ ಗೀತಿಕಾ ಶರ್ಮಾ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು.
ನನ್ನ ಸಾವಿಗೆ ಕಾಂಡಾ ಅವರೇ ಕಾರಣ ಎಂದು ಪತ್ರ ಬರೆದು ದೆಹಲಿಯ ವಸತಿ ಸಂಕೀರ್ಣವೊಂದರಲ್ಲಿ ಗೀತಿಕಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದರು.