ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿ; ಬಾಳೆ, ಟೊಮೆಟೊ ನಾಶ

Last Updated 8 ಜನವರಿ 2011, 8:55 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಸಮೀಪದ ಹೊಸಪುರ ಗ್ರಾಮದಲ್ಲಿ ಗುರುವಾರ ರಾತ್ರಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳು ನಾಶವಾಗಿವೆ. ಹೊಸಪುರ ಗ್ರಾಮದ ಶಿವಣ್ಣೇ ಗೌಡ ಹಾಗೂ ಸುತ್ತಮುತ್ತಲಿನ ಜಮೀನುಗಳಿಗೆ ಗುರುವಾರ ರಾತ್ರಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಟೊಮಾಟೊ ಹಾಗೂ ಬಾಳೆ ಬೆಳೆಯನ್ನು ನಾಶ ಪಡಿಸಿದ್ದು ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇದೇ ಗ್ರಾಮದ ಮಹದೇವಪ್ಪ ಎಂಬುವವರ ಜಮೀನಿಗೂ ನುಗ್ಗಿ ಅಲ್ಲಿ ಬೆಳೆದಿದ್ದ ಕಬ್ಬಿನ ಬೆಳೆಯನ್ನು ಸಹ ತಿಂದು ಹಾಕಿವೆ.

ಕಾಡಂಚಿನ ಗ್ರಾಮದ ಸುತ್ತಲೂ ಸೋಲಾರ್ ವಿದ್ಯುತ್ ಬೇಲಿ ಅಳವಡಿಸಿದ್ದರೂ ಇತ್ತೀಚೆಗೆ ಕಾಡಾನೆಗಳು ನಿರಂತರವಾಗಿ ದಾಳಿ ನಡೆಸಿ ರೈತರು ಬೆಳೆದಿರುವ ಬೆಳೆ ನಾಶಪಡಿಸುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಇತ್ತ ಗಮನಹರಿಸ ಬೇಕು ಮತ್ತು ಕಾಡುಮೃಗಗಳ ಉಪಟಳ ತಪ್ಪಿಸಿ ನಷ್ಟವಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT