ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾನೆ ದಾಳಿ: ವ್ಯಕ್ತಿಗೆ ಗಾಯ

Last Updated 25 ಸೆಪ್ಟೆಂಬರ್ 2011, 20:10 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ಕಾಡಾನೆ ದಾಳಿಗೆ ಸಿಲುಕಿದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಕಂಬೀಪುರದಲ್ಲಿ ನಡೆದಿದೆ.ಶನಿವಾರ ರಾತ್ರಿ ಕೆಲಸ ಮುಗಿಸಿಮನೆಗೆ ತೆರಳುತ್ತಿದ್ದ ಅರುಣ್‌ಕುಮಾರ್ (42) ಎಂಬುವರ ಮೇಲೆ ಆನೆ ದಾಳಿ ನಡೆಸಿದ ಪರಿಣಾಮ ಎರಡು ಕಾಲು ಮತ್ತು ಕೈಗಳಿಗೆ ಪೆಟ್ಟಾಗಿವೆ.
ಅರುಣ್‌ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚೆಗೆ ಗೋಣಿಪುರದ  ವೆಂಕಟೇಶ್ ಎಂಬುವರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದರು. ಕಾಡಿನಿಂದ ನಾಡಿಗೆ ಆನೆಗಳು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ರಾತ್ರಿ ವೇಳೆಯಲ್ಲಿ ರಕ್ಷಣೆ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ನಡುವೆ ಸಾರ್ವಜನಿಕರು ಪ್ರತಿಭಟನೆ ನಡೆಸಿ, ಅರುಣ್‌ಕುಮಾರ್‌ಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT