ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಸಲಹಾ ಕೇಂದ್ರ ಆರಂಭ

Last Updated 17 ಜೂನ್ 2011, 19:30 IST
ಅಕ್ಷರ ಗಾತ್ರ

ಕಡೂರು:  ತಾಲ್ಲೂಕು ಕಚೇರಿ ಆವರಣದಲ್ಲಿ ಉಚಿತ ಕಾನೂನು ಸೇವಾ ಕೇಂದ್ರವನ್ನು ಸಿವಿಲ್ ನ್ಯಾಯಾಧೀಶ ಎಸ್.ಸುರೇಶ್  ಅವರು ಶುಕ್ರವಾರ ಉದ್ಘಾಟಿಸಿದರು.

ಕೇಂದ್ರದಲ್ಲಿ ಪ್ರತಿ ಸೋಮವಾರ ಮತ್ತು ಶುಕ್ರವಾರ ಸಾರ್ವಜನಿಕರಿಗೆ ಉಚಿತ ಕಾನೂನು ನೆರವು ನೀಡಲಾಗುವುದು. ವಾರಕ್ಕೆ ಎರಡು ದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಮತ್ತು ಮಧ್ಯಾಹ್ನ 2ರಿಂದ 6 ಗಂಟೆವರೆಗೆ ವಕೀಲರು ಉಚಿತವಾಗಿ ಸಲಹೆ ನೀಡುವರು ಎಂದರು.

ದೌರ್ಜನ್ಯಕ್ಕೊಳಗಾದ ಮಹಿಳೆ ಮತ್ತು ಮಕ್ಕಳಿಗೆ, ಬಡತನದಲ್ಲಿರುವವರಿಗೆ ಈ ಕೇಂದ್ರದಲ್ಲಿ ಅಗತ್ಯ ಮಾರ್ಗದರ್ಶನವನ್ನೂ ನೀಡಲಾಗುವುದು ಎಂದು ವಕೀಲ ಶೇಖರ್ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಬಿ.ಆರ್ ರೂಪ ಅವರು ಮಾತನಾಡಿದರು.
ಹಿರಿಯ ವಕೀಲ ಬೊಮ್ಮಣ್ಣ, ರೇಷ್ಮಾ, ಗೋವಿಂದ ಸ್ವಾಮಿ, ಶ್ರೀನಿವಾಸ್ ಸೂರಿ, ಕಂದಾಯ ಇಲಾಖೆ ಮತ್ತಿತರ ಇಲಾಖೆ ಅಧಿಕಾರಿಗಳು, ವಕೀಲರು, ಸಾರ್ವಜನಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT