ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮನ್‌ವೆಲ್ತ್ ಕ್ರೀಡಾಕೂಟ ಹಗರಣ: 5 ಸಾವಿರಕ್ಕೂ ಹೆಚ್ಚು ದಾಖಲೆ ಸಂಗ್ರಹ

Last Updated 17 ಜನವರಿ 2011, 19:30 IST
ಅಕ್ಷರ ಗಾತ್ರ

ನವದೆಹಲಿ, (ಪಿಟಿಐ): ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅವ್ಯವಹಾರ ಹಗರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ಜಾಗೃತದಳದ ಅಧಿಕಾರಿಗಳು ಸುಮಾರು ಐದು ಸಾವಿರಕ್ಕೂ ಹೆಚ್ಚು ಮಹತ್ವದ ದಾಖಲೆಗಳನ್ನು ಕಲೆ ಹಾಕಿದ್ದಾರೆ. 

ಗುತ್ತಿಗೆ, ಹಣ ಪಾವತಿ, ಸ್ವತಂತ್ರ ತನಿಖಾ ತಂಡದ ವರದಿ, ಸ್ಥಳೀಯ ನಿರ್ಮಾಣ ಸಂಸ್ಥೆಗಳ ಮಹತ್ವಪೂರ್ಣ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕ್ರೀಡಾಕೂಟ ಸಂಘಟನಾ ಸಮಿತಿಯ ಕಚೇರಿಯಿಂದ ವಶಪಡಿಸಿಕೊಳ್ಳಲಾದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಅವನ್ನು ಜಾಗೃತದಳ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ನಿರ್ಧರಿಸಿದೆ.
~ಕಾಮನ್‌ವೆಲ್ತ್  ಕ್ರೀಡಾಕೂಟ ಹಗರಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು 30 ದೂರುಗಳು ದಾಖಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಜಾಗೃತದಳದ ಅಧಿಕಾರಿಗಳ ತಂಡ ಪ್ರತಿನಿತ್ಯ ಸಂಘಟನಾ ಸಮಿತಿಯ ಪ್ರಧಾನ ಕಚೇರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಈಗಾಗಲೇ ತಂಡ 5ಸಾವಿರಕ್ಕೂ ಹೆಚ್ಚು ದಾಖಲೆಗಳನ್ನು ಸಂಗ್ರಹಿಸಿದೆ’ ಎಂದು ಜಾಗೃತದಳದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಗರಣದ ತನಿಖೆ ನಡೆಸಲು ವಿ.ಕೆ. ಶುಂಗ್ಲು ಅವರ ನೇತೃತ್ವದಲ್ಲಿ ಸರ್ಕಾರ ಉನ್ನತಾಧಿಕಾರ ಸಮಿತಿಯನ್ನು ನೇಮಕ ಮಾಡಿದ್ದು, ತೆರಿಗೆ ಇಲಾಖೆ, ಸಿಬಿಐ ಕೂಡ ಹಗರಣದ ತನಿಖೆ ನಡೆಸುತ್ತಿವೆ.

 ಜಾಮೀನು ಅರ್ಜಿ: ಬುಧವಾರ ವಿಚಾರಣೆ

ನವದೆಹಲಿ, (ಪಿಟಿಐ): ಕ್ವೀನ್ಸ್ ಬ್ಯಾಟನ್ ರಿಲೇ ಹಗರಣಕ್ಕೆ ಸಂಬಂಧಪಟ್ಟಂತೆ ಕಾಮನ್‌ವೆಲ್ತ್ ಸಂಘಟನಾ ಸಮಿತಿಯ ಹಣಕಾಸು ವಿಭಾಗದ ಜಂಟಿ ನಿರ್ದೇಶಕ ಎಂ. ಜಯಚಂದ್ರನ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

ಸೋಮವಾರ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು. ನವೆಂಬರ್ 21ರಂದು ಜಯಚಂದ್ರನ್ ಅವರನ್ನು ಬಂಧಿಸಲಾಗಿತ್ತು.


ಕಾಮನ್‌ವೆಲ್ತ್ ಕ್ರೀಡಾಕೂಟದ ಸಂಘಟನಾ ಸಮಿತಿಯ ಮತ್ತೊಬ್ಬ ಅಧಿಕಾರಿ ಹಾಗೂ ಕಲ್ಮಾಡಿ ಅವರ ಆಪ್ತ ಟಿ.ಎಸ್. ದರ್ಬಾರಿ ಅವರಿಗೆ ಶುಕ್ರವಾರ ಜಾಮೀನು ನೀಡಿದೆ. ಬಂಧಿಸಿದ 60 ದಿನದೊಳಗೆ ದರ್ಬಾರಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಸಿಬಿಐ ವಿಫಲವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT