ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಾಲೆ ಜ್ವರ; ಇಬ್ಬರ ಸಾವು

Last Updated 1 ಜೂನ್ 2013, 12:51 IST
ಅಕ್ಷರ ಗಾತ್ರ

ಕಾಸರಗೋಡು: ಮುಂಗಾರು ಮಳೆಗೂ ಮೊದಲೇ ಜಿಲ್ಲೆಯಲ್ಲಿ ಕಾಮಾಲೆ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಕುಂಬಳೆಯ ಕೊಯಿಪ್ಪಾಡಿ ಕಡಪ್ಪುರ ನಿವಾಸಿ ಹರೀಂದ್ರನ್ (49) ಮತ್ತು ಹೊಸದುರ್ಗದ ಮಾವುಂಗಾಲ್ ನಿವಾಸಿ ಬಾಬು (28) ಗುರುವಾರ ಮೃತಪಟ್ಟಿದ್ದಾರೆ.

20 ದಿನಗಳ ಹಿಂದೆ ಹರೀಂದ್ರನ್ ಅವರಿಗೆ ಕಾಮಾಲೆ ಜ್ವರ ಬಾಧಿಸಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ಸಾವಿಗೀಡಾದರು. ಕುಂಬಳೆ ಕೊಯಿಪ್ಪಾಡಿ, ಮೊಗ್ರಾಲ್, ಪೇರಾಲ್ ಪ್ರದೇಶಗಳಲ್ಲಿ ಹಳದಿ ಕಾಮಾಲೆ ಜ್ವರ ವ್ಯಾಪಕವಾಗಿ ಹರಡುತ್ತಿದ್ದರೂ ಆರೋಗ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT