ಬೆಂಗಳೂರು: ಅವ್ಯವಹಾರದಲ್ಲಿ ಭಾಗಿಯಾಗುವ ಅಥವಾ ಕಾನೂನು ಉಲ್ಲಂಘಿಸುವ ಕುಲಪತಿ ಮತ್ತು ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಪೂರಕವಾಗಿ `ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾಯ್ದೆ-1994~ಕ್ಕೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿದೆ.
ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಅವರು ಮಂಗಳವಾರ ಈ ತಿದ್ದುಪಡಿ ಮಸೂದೆಯನ್ನು ಸದನದಲ್ಲಿ ಮಂಡಿಸಿದರು. ಅವ್ಯವಹಾರದಲ್ಲಿ ಭಾಗಿಯಾಗುವ ಅಥವಾ ಕಾನೂನು ಉಲ್ಲಂಘಿಸುವ ಕುಲಪತಿ ಹಾಗೂ ನೌಕರರ ವಿರುದ್ಧ ಕ್ರಮ ಜರುಗಿಸಲು `ವಿಟಿಯು ಕಾಯ್ದೆ-1994~ರಲ್ಲಿ ಅವಕಾಶ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.