ಲಾಹೋರ್ (ಪಿಟಿಐ): ಕಾರ್ಗಿಲ್ ಯುದ್ಧಕ್ಕೆ ಪಾಕ್ನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರೇ ಕಾರಣ ಎನ್ನುವ ಹೇಳಿಕೆ ನೀಡುವ ಮೂಲಕ ಪಿಎಂಎಲ್-ಎನ್ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿರುವ ಮುಷರಫ್, ಇನ್ನು ಮುಂದೆ ಷರೀಪ್ ಅವರು ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.