ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ನಿಗದಿತ ವೇತನ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನವೂ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಕುರಿತು ಸಮ್ಮೇಳನದಲ್ಲಿ ಚರ್ಚಿಸಿ ಹೋರಾಟ ರೂಪಿಸಲಾಗುವುದು ಎಂದರು.
ಕಾರ್ಮಿಕ ಮುಖಂಡರಾದ ಕೃಷ್ಣ ಚಕ್ರವರ್ತಿ, ಶಂಕರ್ ಸಹಾ, ಕೆ. ರಾಧಾಕೃಷ್ಣ, ಪ್ರವಾಶ್ ಘೋಷ್ ಮತ್ತಿತರರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸಬೇಕು ಎಂದು ಮನವಿ ಮಾಡಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಎಚ್.ಟಿ. ಪತ್ರಿಕಾಗೋಷ್ಠಿಯಲ್ಲಿದ್ದರು.