ಬಸವೇಶ್ವರ ನಗರದ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಪ್ರದಾಯಿಕ ಮತ್ತು ಸಮಕಾಲೀನ ನೃತ್ಯ ಪ್ರದರ್ಶನ ಎಲ್ಲರನ್ನೂ ಆಕರ್ಷಿಸಿತು.
ಅತಿಥಿಯಾಗಿದ್ದ ನಟ ಅನಿರುದ್ಧ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಪ್ರತಿಭೆಯನ್ನು ಬೆಳೆಸಿಕೊಳ್ಳುವುದರೊಂದಿಗೆ ದೇಶವನ್ನು ಬೆಳೆಸಲು ತಮ್ಮ ಕೊಡುಗೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಜಗನ್ನಾಥ ಶೆಟ್ಟಿ, ಕಾರ್ಯದರ್ಶಿ ರೋಷನ್ ಮೆನೆಜಸ್, ಪ್ರಾಚಾರ್ಯೆ ಸಂಧ್ಯಾ ಮೆನೆಜಸ್ ಮತ್ತು ಕಾರ್ಮೆಲ್ ಪ್ರೌಢಶಾಲೆಯ ಪ್ರಾಚಾರ್ಯೆ ಡೊರತಿ ಮೆನಜಸ್ ಇತರರು ಭಾಗವಹಿಸಿದ್ದರು.