ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯ ಮುಂದುವರಿಸಿದ ನ್ಯಾ. ಪದ್ಮರಾಜ ಆಯೋಗ

Last Updated 19 ಜನವರಿ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:  ರಾಜ್ಯದ ಭೂಹಗರಣಗಳ ಕುರಿತು ತನಿಖೆ ನಡೆಸಲು ನೇಮಕವಾಗಿರುವ ನ್ಯಾ. ಪದ್ಮರಾಜ ಆಯೋಗವು ಸಂಬಂಧಪಟ್ಟ ಇಲಾಖೆಗಳಿಂದ ದೂರು ಮತ್ತು ಪ್ರತಿಕ್ರಿಯೆ ಪಡೆಯುವ ಕಾರ್ಯವನ್ನು ಮುಂದುವರೆಸಲಿದೆ.

‘ಸಾಕ್ಷಿಗಳ ದಾಖಲೀಕರಣ ಮತ್ತು ಮಧ್ಯಂತರ ಆದೇಶ ನೀಡದಂತೆ ಆಯೋಗದ ಮೇಲೆ ನಿರ್ಬಂಧ ಹೇರಲಾಗಿದೆ. ಇವೆರಡನ್ನು ಹೊರತುಪಡಿಸಿ ಬೇರೇ ಯಾವುದೇ ನಿರ್ಬಂಧ ಇಲ್ಲ’ ಎಂದು ಆಯೋಗದ ಕಾರ್ಯದರ್ಶಿ ಶ್ರೀವತ್ಸ ಕೆದಿಲಾಯ ಅವರು ಮಂಗಳವಾರ ಇಲ್ಲಿ ತಿಳಿಸಿದರು.

1995ರ ನಂತರ ಮಂಜೂರಾಗಿರುವ ಭೂಮಿಯ ಕುರಿತು ವಿವರ ನೀಡುವಂತೆ ಬಿಡಿಎ, ರಾಜ್ಯ ಗೃಹ ಮಂಡಳಿ ಮತ್ತು ಕೆಐಎಡಿಬಿಗೆ ಪದ್ಮರಾಜ ಆಯೋಗ ನೋಟಿಸ್ ಜಾರಿ ಮಾಡಿತ್ತು.

‘ಜಾರಿ ಮಾಡಿರುವ ನೋಟಿಸ್‌ಗಳಿಗೆ ಪ್ರತಿಕ್ರಿಯೆ ಪಡೆದುಕೊಳ್ಳುವ ಅಧಿಕಾರ ಆಯೋಗಕ್ಕೆ ಇದೆ. ಕೆಲವರು ಆಯೋಗಕ್ಕೆ ದೂರನ್ನೂ ನೀಡಿದ್ದಾರೆ. ದೂರು ದಾಖಲಿಸಿಕೊಳ್ಳುವುದಕ್ಕೆ ಯಾವುದೇ ನಿರ್ಬಂಧ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT