ಬೆಂಗಳೂರು: ಕನ್ನಡ ಚಳವಳಿ ವಾಟಾಳ್ ಪಕ್ಷವು ನಗರದಲ್ಲಿ ಮಂಗಳವಾರ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತ ನಾ.ಗೋಪಿ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಿತ್ತು.
‘ಕಳೆದ 15 ವರ್ಷಗಳಿಂದ ನಾ.ಗೋಪಿ ಕನ್ನಡ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅವರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯಬೇಕು’ ಎಂದು ಸಭೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಒತ್ತಾಯಿಸಿದರು.