ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಕರ್ತರಿಂದಲೇ ಬಿಜೆಪಿ ಕಾರ್ಯಾಲಯ ಧ್ವಂಸ

Last Updated 21 ಡಿಸೆಂಬರ್ 2010, 9:55 IST
ಅಕ್ಷರ ಗಾತ್ರ

ಸಿಂದಗಿ:  ಬಿಜೆಪಿ ಕಾರ್ಯಕರ್ತರೇ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ಧ್ವಂಸಗೊಳಿಸಿ ದಾಂಧಲೆ ಮಾಡಿದ ಘಟನೆ ಸಿಂದಗಿ ತಾಲ್ಲೂಕಿನ ದೇವರಹಿಪ್ಪರಗಿಯಲ್ಲಿ ಸೋಮವಾರ ನಡೆದಿದೆ.

ದೇವರಹಿಪ್ಪರಗಿ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾಗಿ ಅಶೋಕ ಅಲ್ಲಾಪುರ ಅವರಿಗೆ ’ಬಿ’ಫಾರಂ ನೀಡಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಹಠಾತ್ತನೇ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯಕ್ಕೆ ಧಾವಿಸಿ ಪಕ್ಷದ ಬ್ಯಾನರ್ ಹರಿದು, 25ಕ್ಕೂ ಅಧಿಕ ಕುರ್ಚಿಗಳನ್ನು ಮುರಿದು ಹಾಕಿ ಅವುಗಳಿಗೆ ಬೆಂಕಿ ಹಚ್ಚಿದರು.

ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಅಧ್ಯಕ್ಷ ಡಾ.ಆರ್.ಆರ್.ನಾಯಕ ಅವರ ಮುಖಕ್ಕೆ ಮಸಿ ಹಚ್ಚಿ ರಾಜೀನಾಮೆಗೆ ಒತ್ತಾಯಿಸಿದರು.
ತಮ್ಮ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತನಿಗೆ ಟಿಕೆಟ್ ನೀಡದೇ ಸಿಂದಗಿ ಕ್ಷೇತ್ರದ ಅಶೋಕ ಅಲ್ಲಾಪುರ ಅವರಿಗೆ ಟಿಕೆಟ್ ನೀಡಿರುವುದೇ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

“ನಮ್ಮ ಕ್ಷೇತ್ರದವರಲ್ಲದ ಬೇರೊಬ್ಬರನ್ನು ಜಿ.ಪಂ. ಅಭ್ಯರ್ಥಿಯಾಗಿ ’ಬಿ’ಫಾರಂ ನೀಡಿರುವುದು ಅನ್ಯಾಯದ ಪರಮಾವಧಿಯಾಗಿದೆ. ಹೀಗಾಗಿ ಅಲ್ಲಾಪುರ ಪರ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುತ್ತೇವೆ” ಎಂದು ಬಿಜೆಪಿ ಪ್ರಮುಖರಾದ ಶಿವಾಜಿ ಮೆಟಗಾರ, ರಮೇಶ ಮಸಬಿನಾಳ, ಪ್ರಮೋದ ನಾಡಗೌಡ, ಲೋಕೇಶ ಸೌದಿ ಹೇಳಿದರು.

ಅಸಮಾಧಾನ: ತಮ್ಮ ಕ್ಷೇತ್ರದವರಿಗೆ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಿರುವುದು ತಮಗೂ ತೀರ ಅಸಮಾಧಾನ ತರಿಸಿದೆ ಎಂದು ಬಿಜೆಪಿ ಅಧ್ಯಕ್ಷ ಡಾ.ಆರ್.ಆರ್. ನಾಯಕ ’ಪ್ರಜಾವಾಣಿ’ ಪ್ರತಿನಿಧಿಗೆ ತಿಳಿಸಿದ್ದಾರೆ.

ರಾಜೀನಾಮೆ:ಟಿಕೆಟ್ ಹಂಚಿಕೆ ವಿಷಯವಾಗಿ ಮಹೇಶ ಬುದ್ನಿ ಅವರು ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತು ಪ್ರಾಥಮಿಕ ಸದ್ಯಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT