ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲ್ತುಳಿತ: ಮೂವರು ಬಲಿ

Last Updated 10 ಜನವರಿ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್(ಐಎಎನ್‌ಎಸ್): ಲಾಹೋರ್‌ನಲ್ಲಿ ಸೋಮವಾರ ರಾತ್ರಿ ನಡೆದ ಖ್ಯಾತ ಗಾಯಕ ಅತಿಫ್ ಅಸ್ಲಾಮ್ ಅವರ ಗಾಯನಗೋಷ್ಠಿಯ ಸಂದರ್ಭದಲ್ಲಿ ಸಂಭವಿಸಿದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೂವರು ಬಾಲಕಿಯರು ಸತ್ತಿದ್ದು, ಐವರು ಗಾಯಗೊಂಡಿದ್ದಾರೆ.

ಈ ಗಾಯನಗೋಷ್ಠಿಯನ್ನು ಖಾಸಗಿ ಕಾಲೇಜು ಆಯೋಜಿಸಿದ್ದು, ಸುಮಾರು 4,000 ಮಂದಿ ಸೇರಬಹುದಾದ ಸಭಾಂಗಣದಲ್ಲಿ 7,000 ಜನರು ಸೇರಿದ್ದು ಈ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

  ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಬಾಜ್ ಶರೀಫ್ ಘಟನೆ ಕುರಿತು ಹೆಚ್ಚಿನ ತನಿಖೆಗೆ ಆದೇಶಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT