ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ: ಬ್ರಿಟಿಷರ ಕಾಲದ ಒಪ್ಪಂದ ರದ್ದಾಗಲಿ

Last Updated 5 ಅಕ್ಟೋಬರ್ 2012, 18:30 IST
ಅಕ್ಷರ ಗಾತ್ರ

ಧಾರವಾಡ: `ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಸಂಬಂಧ ಬ್ರಿಟಿಷರು ಹಾಗೂ ಮೈಸೂರು ಮಹಾರಾಜರ ಮಧ್ಯೆ ಏರ್ಪಟ್ಟ ಹಳೆಯ ಒಪ್ಪಂದ ರದ್ದಾಗಬೇಕು. ವಾಸ್ತವ ಸ್ಥಿತಿಯ ಆಧಾರದ ಮೇಲೆ ನೂತನ ಒಪ್ಪಂದ ಏರ್ಪಡಬೇಕು~ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪಾಟೀಲ ಪುಟ್ಟಪ್ಪ ಮನವಿ ಮಾಡಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಹಳೆಯ ಒಪ್ಪಂದದ ಅನ್ವಯವೇ ನೀರು ಬಿಡಬೇಕು ಎಂದು ತಮಿಳುನಾಡು ಸರ್ಕಾರ ಒತ್ತಾಯಿಸುತ್ತಾ ಬಂದಿದೆ. ಆದರೆ ಸ್ವಾತಂತ್ರ್ಯಾನಂತರ ಕರ್ನಾಟಕ ಸಾಕಷ್ಟು ಬೆಳವಣಿಗೆ ಹೊಂದಿದೆ. ನಮ್ಮ ರಾಜ್ಯಕ್ಕೆ ಕಾವೇರಿ ನೀರು ಹೆಚ್ಚಿನ ಪ್ರಮಾಣದಲ್ಲಿ ಬೇಕಾಗುತ್ತದೆ~ ಎಂದು ಹೇಳಿರು.
`ನೀರು ಹಂಚಿಕೆ ಕುರಿತು ಪ್ರಾಧಿಕಾರದ ನಿರ್ಣಯ ಖಂಡಿಸಿ ವಿವಿಧ ಸಂಘಟನೆಗಳು ಇದೇ 6ರಂದು ನೀಡಿರುವ ಕರ್ನಾಟಕ ಬಂದ್‌ಗೆ ಕರ್ನಾಟಕ ವಿದ್ಯಾವರ್ಧಕ ಸಂಘವು ಸಂಪೂರ್ಣ ಬೆಂಬಲ ನೀಡಲಿದೆ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT