ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ಎಸ್.ಎಂ. ಕೃಷ್ಣ ಅವರು ಈ ಬಗ್ಗೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, `ಕರ್ನಾಟಕದ ಕೆಲ ಜಲಾಶಯಗಳಿಂದ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರನ್ನು ತಾತ್ಕಾಲಿಕವಾಗಿ ನಿಲ್ಲಿಸುವಲ್ಲಿನ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಹಾಗೂ ಈಗಾಗಲೇ ಕೇಂದ್ರ ತಂಡಗಳು ಎರಡು ರಾಜ್ಯಗಳಲ್ಲಿನ ವಸ್ತು ಸ್ಥಿತಿಯ ಅಧ್ಯಯನದಲ್ಲಿದ್ದು, ಅಧಿಕಾರಿಗಳು ನೀಡುವ ಮಧ್ಯಾಂತರ ವರದಿಯ ಆಧಾರದ ಮೇಲೆ ಮುಂದಿನ ಕ್ರಮಗಳ ಬಗ್ಗೆ ನಿರ್ಣಯಿಸಬಹುದು~ ಎಂದು ಕೃಷ್ಣ ಅವರು ಪ್ರಧಾನಿ ಅವರಿಗೆ ಪತ್ರದ ಮುಖಾಂತರ ವಿನಂತಿಸಿಕೊಂಡಿದ್ದಾರೆ. ಪತ್ರದ ಪ್ರತಿಯು ಇಲ್ಲಿ ಬಿಡುಗಡೆಯಾಗಿದೆ.