ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ಹೋರಾಟ ಬೆಂಬಲಿಸಿ ರ‌್ಯಾಲಿ

Last Updated 9 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: `ರೈತರ ಹಿತ ಕಾಪಾಡುವ ದೃಷ್ಟಿಯಿಂದ ಕಾವೇರಿ ನೀರಿನ ಬಗ್ಗೆ ರಾಜ್ಯ ಸರ್ಕಾರ ಸರಿಯಾದ ಅಂಕಿ ಅಂಶಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು' ಎಂದು ಓಂಕಾರ ಆಶ್ರಮದ ಮಧುಸೂದನಾನಂದ ಸ್ವಾಮೀಜಿ ಒತ್ತಾಯಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಮಂಡ್ಯದಲ್ಲಿ ಕಾವೇರಿ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣಾ ಟ್ರಸ್ಟ್, ಜಯಕರ್ನಾಟಕ ಆಶ್ರಯದಲ್ಲಿ ರಾಜರಾಜೇಶ್ವರಿನಗರದಿಂದ ಮಂಡ್ಯದವರೆಗೆ ಹಮ್ಮಿಕೊಂಡಿರುವ ಬೈಕ್ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಕಾರ್ಮಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ.ಸಿ.ಪಾಪಣ್ಣ, `ರೈತರಿಗೆ ರಾಜ್ಯ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತಿದೆ. ಇದನ್ನು ತಡೆಯಲು ಸಂಘಟಿತ ಹೋರಾಟ ಅಗತ್ಯ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT