ಕಳೆದ ವರ್ಷ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ನಿರ್ಧಾರವಾದಂತೆ ಸಂಧಾನಕಾರರನ್ನು ನೇಮಿಸಿ ಒಂದು ವರ್ಷದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ನಿಗದಿಯಂತೆ ಅವರು ಒಂದು ವರ್ಷದಲ್ಲಿ ವರದಿ ಸಲ್ಲಿಸಿದ್ದಾರೆ.
ಸಂಧಾನಕಾರರು ಹುರಿಯತ್ ಸಂಘಟನೆಯ ಅಧ್ಯಕ್ಷ ಮೌಲಾನಾ ಅಬ್ಬಾಸ್ ಅನ್ಸಾರಿ ಅವರನ್ನು ಹೊರತುಪಡಿಸಿ ಬೇರಾವುದೇ ಪ್ರತ್ಯೇಕತಾವಾದಿ ಸಂಘಟನೆಯ ಮುಖಂಡರನ್ನು ಭೇಟಿ ಮಾಡಲಿಲ್ಲ. ರಾಜ್ಯದ ಎಲ್ಲ ಕಡೆಗಳಲ್ಲಿ ಸಂಚರಿಸಿ ಪ್ರತ್ಯೇಕತಾವಾದಿಗಳ ಬೇಡಿಕೆ ಮತ್ತು ನಾಗರಿಕ ಅಗತ್ಯಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.